ಉಪ್ಪಿನಂಗಡಿ: ಚಿನ್ನ ಖರೀದಿಗೆ ತೆರಳುತ್ತಿದ್ದ ವ್ಯಕ್ತಿಯಿಂದ 10 ಲ.ರೂ. ಕಳ್ಳತನ ➤ ಆರೋಪಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 24. ಮಗಳ ವಿವಾಹಕ್ಕೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಅವರಿಂದ 10 ಲಕ್ಷ ರೂ.ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ಮುಸ್ತಫಾ (41) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 9 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ಇನ್ನೋರ್ವ ಆರೋಪಿ ಒಂದು ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

Also Read  ಬೆಲೆಯೇರಿಕೆ ವಿರೋಧಿಸಿ ಮಾ. 02ರಂದು ಕಡಬದಲ್ಲಿ ಪ್ರತಿಭಟನೆ

error: Content is protected !!
Scroll to Top