ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 24. ದಿವಂಗತ ನಟ ಡಾ.ಪುನೀತ್ ರಾಜ್​ ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ ಎಂದರು.

Also Read  ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು...!!

 

error: Content is protected !!
Scroll to Top