ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಮಾ.24. ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಐದು ವರ್ಷದ ಬಾಲಕನನ್ನು ಮಕ್ಕಳ ಕಾನ್‌ಸ್ಟೇಬಲ್ ಹುದ್ದೆಗೆ ನೇಮಿಸಲಾಗಿದೆ. ಅನುಕಂಪದ ಆಧಾರದಲ್ಲಿ ಮಗುವಿಗೆ ಈ ಹುದ್ದೆ ಲಭಿಸಿದೆ.

ಯುಕೆಜಿ ವಿದ್ಯಾರ್ಥಿಯಾಗಿರುವ ನಮನ್ ರಾಜ್‌ವಾಡೆ ಅವರೇ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕಗೊಂಡ ಬಾಲಕ ಛತ್ತೀಸ್‌ಗಢದ ಸರ್ಗುಜಾದಲ್ಲಿ ಅವರು ಈ ಹುದ್ದೆಗೆ ನಿಯೋಜನೆಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿದ್ದ ಬಾಲಕನ ತಂದೆ ರಾಜ್‌ಕುಮಾರ್ ರಾಜವಾಡೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿನ ಬೆನ್ನಲ್ಲೇ ಆಡಳಿತ ಮಂಡಳಿಯು ರಾಜ್‌ಕುಮಾರ್ ಅವರ ಪುತ್ರ, ಐದರ ಬಾಲಕನನ್ನು ಅನುಕಂಪದ ಆಧಾರದ ಮೇಲೆ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ ಮಾಡಿದೆ.

 

error: Content is protected !!
Scroll to Top