ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಮಾ.24. ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಐದು ವರ್ಷದ ಬಾಲಕನನ್ನು ಮಕ್ಕಳ ಕಾನ್‌ಸ್ಟೇಬಲ್ ಹುದ್ದೆಗೆ ನೇಮಿಸಲಾಗಿದೆ. ಅನುಕಂಪದ ಆಧಾರದಲ್ಲಿ ಮಗುವಿಗೆ ಈ ಹುದ್ದೆ ಲಭಿಸಿದೆ.

ಯುಕೆಜಿ ವಿದ್ಯಾರ್ಥಿಯಾಗಿರುವ ನಮನ್ ರಾಜ್‌ವಾಡೆ ಅವರೇ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕಗೊಂಡ ಬಾಲಕ ಛತ್ತೀಸ್‌ಗಢದ ಸರ್ಗುಜಾದಲ್ಲಿ ಅವರು ಈ ಹುದ್ದೆಗೆ ನಿಯೋಜನೆಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿದ್ದ ಬಾಲಕನ ತಂದೆ ರಾಜ್‌ಕುಮಾರ್ ರಾಜವಾಡೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿನ ಬೆನ್ನಲ್ಲೇ ಆಡಳಿತ ಮಂಡಳಿಯು ರಾಜ್‌ಕುಮಾರ್ ಅವರ ಪುತ್ರ, ಐದರ ಬಾಲಕನನ್ನು ಅನುಕಂಪದ ಆಧಾರದ ಮೇಲೆ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ ಮಾಡಿದೆ.

 

Scroll to Top