ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 26. ಉರಗ ಸಂರಕ್ಷಕ ಸ್ನೇಕ್ ಅಶೋಕ್‌ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಕಳೆದ ರಾತ್ರಿ ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ನಾಗರಹಾವು ಹಿಡಿಯುತ್ತಿದ್ದ ವೇಳೆ ಹಾವು ಅವರ ಬಲಗಾಲಿಗೆ ಕಚ್ಚಿದೆ. ತಕ್ಷಣವೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Also Read  ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ

error: Content is protected !!
Scroll to Top