ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮೊಳಕಾಲ್ಮುರು, ಮಾ.27, ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು.

ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.

 

 

error: Content is protected !!
Scroll to Top