ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ ➤ ಹೆಡ್ ಕಾನ್ಸ್ ಟೇಬಲ್ ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪಗಳ ಪತ್ರ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಶಿಸ್ತು ನಿಯಮ ಉಲ್ಲಂಘಿಸಿದ ಸುಬ್ರಹ್ಮಣ್ಯನಗರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಶಿವಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಉತ್ತರ ವಿಭಾಗದ ಡಿಸಿಪಿ ದೇವರಾಜ್ ಆದೇಶ ಹೊರಡಿಸಿದ್ದಾರೆ.


ಸುಬ್ರಹ್ಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್  ಶರಣಗೌಡ ವಿರುದ್ಧ ಸಿಬ್ಬಂದಿಗೆ ಕಿರುಕುಳ, ಭ್ರಷ್ಟಾಚಾರ ಸೇರಿದಂತೆ ಕೆಲ ಗಂಭೀರ ಆರೋಪಗಳನ್ನು ಒಳಗೊಂಡ ದೂರಿನ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.

Also Read  ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್

 

error: Content is protected !!
Scroll to Top