PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.28. 2022ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಸಬ್‌ ಇನ್‌ ಸ್ಪೆಕ್ಟರ್‌ಗಳ ನೇಮಕಾತಿ ಹಗರಣದ ಭಾಗವಾಗಿ ವಿಚಾರಣೆ ಎದುರಿಸಿದ್ದ ಭಟ್ ಅವರು ಸಿದ್ದಾಪುರ ತಾಲೂಕಿನ ಹೇರೂರು ಗ್ರಾಮದ ತಮ್ಮ ನಿವಾಸದ ಪಂಪ್‌ ಹೌಸ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

Scroll to Top