ಮತದಾರರಿಗೆ ಆಮಿಷ, ನಗದು, ಕುಕ್ಕರ್‌, ಹೆಲ್ಮೆಟ್‌, ದಿನಸಿ ಕಿಟ್‌ಗಳ ಜಪ್ತಿ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ಮತದಾರರ ಓಲೈಕೆಗೆ ಉಡುಗೊರೆಗಳ ಮಹಾಪೂರ, ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣು ರಾಜ್ಯ ವಿಧಾನಸಭಾ ಚುನಾವಣಾ ಕಾವು ಏರಿದಂತೆ ಮತದಾರರ ಓಲೈಕೆಗೆ ಉಡುಗೊರೆಗಳ ಮಹಾಪೂರವನ್ನೇ ಹರಿಸಲಾಗುತ್ತಿದ್ದು, ರಾಜಧಾನಿಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.


ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಅಖಾಡಕ್ಕೆ ಇಳಿದಿರುವ ಟಿಕೆಟ್‌ ಆಕಾಂಕ್ಷಿಗಳು ಮತದಾರರ ಮನ ಗೆಲ್ಲಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಕ್ಷೇತ್ರಗಳಲ್ಲಿಮತದಾರರ ಓಲೈಕೆ ಕಸರತ್ತು ಜೋರಾಗಿದ್ದು, ಸಂಭವನೀಯ ಅಭ್ಯರ್ಥಿಗಳು ಪರಸ್ಪರ ಪೈಪೋಟಿಗೆ ಇಳಿದವರಂತೆ ಹಣ, ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಮತ್ತೊಂದೆಡೆ ಹಬ್ಬ, ವಿಶೇಷ ಸಂದರ್ಭಗಳ ನೆಪ ಮಾಡಿಕೊಂಡು ಮನೆ ಮನೆಗೆ ದಿನಸಿ ಕಿಟ್‌ ವಿತರಿಸಲಾಗುತ್ತಿದೆ.

Also Read  ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ..!

 

error: Content is protected !!
Scroll to Top