ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಮಾ.29. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮದರ್ಶಿಗಳು ಹಾಗೂ ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ದ.ಕ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಅಮಟೆ IPS, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯ ಮೋನ್ನಪ್ಪ ಗೌಡ ಹಾಗೂ ಇತರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

error: Content is protected !!
Scroll to Top