ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.29. ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿ ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಚಿಂತಾಮಣಿ ಮತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದು, ಇವರಿಂದ 3.180 ಕೆಜಿ ಗಾಂಜಾವನ್ನು ವಶಕ್ಕೆ ಪಡೆಲಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತರು ಇಲ್ಲಿನ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜು ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತ ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ ನೇತೃತ್ವದ ತಂಡ ದಾಳಿ ಮಾಡಿ ಆರೋಪಿಗಳ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Also Read  ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

 

error: Content is protected !!
Scroll to Top