ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ.!              ➤ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

(ನ್ಯೂಸ್ ಕಡಬ)Newskadaba.com ಗಂಗಾವತಿ: ಮಾ.29 ಗಂಗಾವತಿ ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಹತ್ತುವಾಗ ವೀರೇಶ್ ಎಂಬ ಯುವಕ  ಹೃದಯಘಾತ ಸಂಭವಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗಿದೆ ಕೊನೆಯುಸಿರೆಳೆದ ಘಟನೆ ನಡೆದಿದೆ.

ವಿರೇಶ ಕುಷ್ಟಗಿ ತಾಲೂಕಿನ ವಣಗೇರಿ ಗ್ರಾಮದ ನಿವಾಸಿಯಾಗಿದ್ದಾನೆ. ತನ್ನ ನಾಲ್ವರ ಗೆಳೆಯರ ಜತೆ ಅಂಜನಾದ್ರಿ ದರ್ಶನಕ್ಕೆ ಆಗಮಿಸಿದ್ದು,ಮಧ್ಯಾಹ್ನ ಗೆಳೆಯರ ಜತೆ ಬೆಟ್ಟ ಹತ್ತುವ ಸಂದರ್ಭದಲ್ಲಿ ಮೂರ್ಛೆ ಬಂದು ಮೆಟ್ಟಿಲು ಮೇಲೆ ಬಿದ್ದಾಗ ಜತೆಗಿದ್ದವರು ದೇವಸ್ಥಾನ ಸಿಬ್ಬಂದಿ ಆಟೋ ಮೂಲಕ ಆನೆಗೊಂದಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾನೆಂದು ವೈದ್ಯರು ತಿಳಿಸಿದ್ದಾರೆ.

Also Read  ಮಂಗಳೂರಿನಲ್ಲಿ ಶಂಕಿತ ಕೊರೋನಾಗೆ ಮೊದಲ‌ ಬಲಿ ➤ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಮೃತ್ಯು

 

 

error: Content is protected !!
Scroll to Top