(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ.29 ನೌಕರರಿಗೆ ಬಿಎಂಟಿಸಿ ಅಧಿಕಾರಿಗಳ ಕಿರುಕುಳ ಮುಂದುವರಿದಿದ್ದು, ಮಗಳ ಕಾಲೇಜು ಫೀಸ್ ಕಟ್ಟಲು ಜೇಬಲ್ಲಿ ಇಟ್ಟುಕೊಂಡಿದ್ದ ಹಣವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ನ್ಯಾಯ ನೀಡುವಂತೆ ಬಸ್ ಚಾಲಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಾರಿಗೆ ನೌಕರರು ಅಧಿಕಾರಿಗಳ ಕಿರುಕುಳ ತಾಳಲಾರದೆ ಪ್ರತಿವರ್ಷ ಮುಷ್ಕರಕ್ಕೆ ಮುಂದಾಗುತ್ತಾರೆ. ಸರ್ಕಾರ ಕೂಡ ಅಧಿಕಾರಿಗಳ ಕಿರುಕುಳವನ್ನು ತಪ್ಪಿಸುತ್ತೇವೆ ಅಂತ ಸಾಲು ಸಾಲು ಭರವಸೆಯನ್ನು ಕೊಡುತ್ತದೆ. ಆದರೆ ಎಷ್ಟೇ ಭರವಸೆ ನೀಡಿದರೂ ಬಿಎಂಟಿಸಿಯಲ್ಲಿ ಅಧಿಕಾರಿಗಳ ಕಿರುಕುಳ ತಪ್ಪುತ್ತಿಲ್ಲ ಎನ್ನುವುದಕ್ಕೆ ಈ ಪ್ರಕರಣ ಉದಾಹರಣೆಯಾಗಿ ನಿಲ್ಲುತ್ತದೆ. 








