ಕರಾವಳಿಯ ಮೂವರು ಮಹಿಳೆಯರು ರಾಷ್ಟ್ರಪತಿಗಳೊಂದಿಗೆ ಸಂವಾದ ನಡೆಸಲು ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.30. ಬಂಟ್ವಾಳದ ಮೂವರು ಮಹಿಳೆಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಜೊತೆ ಸಂವಾದ ನಡೆಸುವ ಸೌಭಾಗ್ಯ ಪಡೆದುಕೊಂಡಿದ್ದು, ಅದಕ್ಕಾಗಿ ದೆಹಲಿಯತ್ತ ಹೊರಟಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿರುವ ಈ ಮೂವರು ಮಹಿಳೆಯರೂ ಬಂಟ್ವಾಳ ತಾಲೂಕಿನವರಾಗಿದ್ದು, ಬೆಂಗಳೂರಿಗೆ ರೈಲಿನಲ್ಲಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ಪಯಣಿಸುವ ಭಾಗ್ಯ ಇವರಿಗೆ ಒದಗಿ ಬಂದಿದ್ದು, ಅಳಿಕೆ ಅನುಗ್ರಹ ಒಕ್ಕೂಟದ ವಾರಿಜ ಮತ್ತು ಅಮಿತ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನೀ ಒಕ್ಕೂಟದ ಇಂದ್ರಾವತಿ ಎಂಬವರೇ ರಾಷ್ಟ್ರಪತಿಗಳ ಭೇಟಿಯ ಅವಕಾಶ ಪಡೆದವರು ಎಂದು ತಿಳಿದುಬಂದಿದೆ.

Also Read  ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ

error: Content is protected !!
Scroll to Top