ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ವದಂತಿ..!! ➤ ಹೆಬ್ಬಾರ್, ಎಸ್‌ಟಿಎಸ್‌ ಜತೆ ಸಿಎಂ ಚರ್ಚೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.  ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹಾಗೂ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.ವಿಧಾನಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೊಪ್ಪಳ, ಹಾವೇರಿ, ಧಾರವಾಡ ಜಿಲ್ಲೆಗಳ ಪ್ರವಾಸ ರದ್ದುಗೊಳಿಸಿ ರೇಸ್‌ಕೋರ್ಸ್‌ ನಿವಾಸದಲ್ಲಿದ್ದರು.

ಅಲ್ಲಿಗೆ ಸಚಿವರನ್ನು ಕರೆಸಿಕೊಂಡು ಪಕ್ಷ ತ್ಯಜಿಸದಂತೆ ಕಿವಿ ಮಾತು ಹೇಳಿದರೆಂದು ತಿಳಿದು ಬಂದಿದೆ. ಈ ಮಧ್ಯೆ ಸಚಿವ ನಾರಾಯಣ ಗೌಡ ಬಿಜೆಪಿ ತೊರೆಯಲಿದ್ದಾರೆ ಎಂಬ ಸುದ್ದಿ ಕಳೆದ ವಾರ ದಟ್ಟವಾಗಿತ್ತು. ಆದರೆ ಪ್ರಧಾನಿ ಮೋದಿ ಅವರ ಮಂಡ್ಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದ ನಾರಾಯಣ ಗೌಡ ಅವರು ಬಳಿಕ ದಿಲ್ಲಿಗೆ ತೆರಳಿ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಬಳಿಕ ಪಕ್ಷಾಂತರ ವದಂತಿಗೆ ತೆರೆ ಬಿದ್ದಿದೆ.

Also Read  ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ

 

 

 

error: Content is protected !!
Scroll to Top