ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್.!! ➤ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 30 ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಮತಬೇಟೆ ಚುರುಕಾಗಿದೆ. ಈ ಬಾರಿ ಶತಾಯಗತಾಯ ಕಮಲ ಪಾಳೆಯಿಂದ ಅಧಿಕಾರವನ್ನು ಪಡೆಯಲು ಜೆಡಿಎಸ್ ತೊಡೆ ತಟ್ಟಿ ನಿಂತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತದಾರರಿಗೆ ಹಲವಾರು ಭರವಸೆಗಳನ್ನು ನೀಡುವ ಮೂಲಕ ತನ್ನತ್ತ ಸೆಳೆಯುತ್ತಿದೆ.

‘ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ನೀಡಲಿದ್ದು, ಹತ್ತು ಸಿಲಿಂಡರ್‌ಗಳನ್ನು ಅರ್ಧ ಬೆಲೆಗೆ ನೀಡುವ ಯೋಜನೆ ಜಾರಿಗೊಳಿಸಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

Also Read  ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ

 

 

 

error: Content is protected !!
Scroll to Top