ಉಡುಪಿ: ಬ್ಲೇಡ್‌ನಿಂದ ಇರಿದು ಯುವಕನ ಕೊಲೆಗೆ ಯತ್ನ     ➤ ಇಬ್ಬರು ವಶಕ್ಕೆ..!

(ನ್ಯೂಸ್ ಕಡಬ)Newskadaba.com ಮಾ.31 ಕ್ಷುಲ್ಲಕ ಕಾರಣಕ್ಕಾಗಿ ಗಾಂಜಾ ನಶೆಯಲ್ಲಿದ್ದ ನಾಲ್ವರು ಯುವಕರ ತಂಡ ವ್ಯಕ್ತಿಯೊಬ್ಬರಿಗೆ ಲೇಸರ್ ಬ್ಲೇಡ್‌ನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಾ.30ರಂದು ನಸುಕಿನ ವೇಳೆ ಆದಿಉಡುಪಿ ಎಪಿಎಂಸಿ ಮಾರ್ಕೆಟ್ ಹಿಂಬದಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಆದಿ ಉಡುಪಿಯ ಪ್ರಶಾಂತ (27) ಹಾಗೂ ಹಲ್ಲೆ ನಡೆಸುವ ವೇಳೆ ಗಾಯಗೊಂಡಿದ್ದ ಆರೋಪಿಗಳಾದ ಪ್ರಶಾಂತ್ ಮತ್ತು ಸಂತೋಷ್ ಎಂಬವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

 

 

 

error: Content is protected !!

Join the Group

Join WhatsApp Group