ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.01. ಬಾಲಕನೋರ್ವ ಮೈದಾನದಲ್ಲಿ ಶವವಾಗಿ ಪತ್ತೆಯಾದ ಘಟನೆ ಹುಬ್ಬಳ್ಳಿಯಲ್ಲಿ ವರದಿ ತಿಳಿಸಿದೆ.

ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಶಾಲೆಗೆ ರಜೆ ಹಿನ್ನೆಲೆಯಲ್ಲಿ ನದೀಂ, ಬೆಂಡಿಗೇರಿ ಪೊಲೀಸ್ ಠಾಣೆ ಹತ್ತಿರ ಇರುವ ಕ್ರಿಶ್ಚಿಯನ್ ಕಾಲೋನಿಯ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

Also Read  ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು

 

 

error: Content is protected !!
Scroll to Top