ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ !

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.03. 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದು, ಈ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ ಮಾಡಿ ಬಳಿಕ ಮಗುವಿನ ಶವವನ್ನು ಮಿರ್ಚಿ ಗ್ರೌಂಡ್ ಕಂಟಿಯಲ್ಲಿ ಎಸೆದು ಹೋಗಿದ್ದ ಎಂದು ತಿಳಿದುಬಂದಿದೆ.

 

error: Content is protected !!
Scroll to Top