3ನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ.!! ➤ ಎಚ್‌ ಡಿ.ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಮಂಡ್ಯ ,ಏ.04   ‘ನನಗೆ 2 ಬಾರಿ ಹೃದಯ ಶಸ್ತಚಿಕಿತ್ಸೆಯಾಗಿದೆ, ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. 3ನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಭಾವುಕರಾಗಿ ನುಡಿದರು.

ಪಟ್ಟಣದಲ್ಲಿ ನಡೆದ ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಎಷ್ಟು ಬಾರಿ ಮುಖ್ಯಮಂತ್ರಿಯಾದರೂ ಮಣ್ಣಿಗೆ ಹೋಗುವಾಗ ನಾನು ಮಾಜಿ ಮುಖ್ಯಮಂತ್ರಿಯೇ. ನನ್ನ ಹೋರಾಟ ಮುಖ್ಯಮಂತ್ರಿ ಆಗುವುದಕ್ಕಾಗಿ ಅಲ್ಲ, ನನ್ನ ಹೋರಾಟವೇನಿದ್ದರೂ ಬಡವರ ಪರವಾಗಿ ಮಾತ್ರ’ ಎಂದರು.

 

 

 

 

 

 

 

 

 

 

 

 

 

Scroll to Top