ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಹೊಸಪೇಟೆ ತಾಲೂಕಿನ ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು. ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ.

ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್ ಅನ್ಸಾರಿ, ಅಮಿತ್ ಕುಮಾರ್ ಮೃತಪಟ್ಟವರು.

Also Read  ಹಾಸ್ಯ ನಟ ಮಿಮಿಕ್ರಿ ರಾಜಗೋಪಾಲ್‌ ನಿಧನ ➤ ಚಿತ್ರರಂಗದ ಗಣ್ಯರ ಸಂತಾಪ

 

error: Content is protected !!
Scroll to Top