ಉಡುಪಿ: ಘಾಟ್ ನಲ್ಲಿ ವಾಹನ ಸಂಚಾರ ಎ.15 ವರೆಗೆ ನಿಷೇಧ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.04. ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ಕಾಂಕ್ರೀಟ್‌ ಪೇವ್‌ ಮೆಂಟ್‌ ಕಾಮಗಾರಿ ಹಿನ್ನಲೆಯಲ್ಲಿ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಇದ್ದ ನಿಷೇಧವನ್ನು 10 ದಿನಗಳ ಕಾಲ ಹೆಚ್ಚುವರಿಯಾಗಿ ಮುಂದುವರೆಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಎ. 05 ರ ವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು, ಇದೀಗ ಕಾಮಗಾರಿ ವಿಳಂವಾಗಿರುವ ಕಾರಣ ಈ ವಾಹನ ಸಂಚಾರದ ನಿಷೇಧವನ್ನು ಎಪ್ರಿಲ್ 15 ರವರೆಗೆ ಮುಂದುವರೆಸಲಾಗಿದ್ದು, ವಾಹನ ಸವಾರರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸಲು ಆದೇಶಿಸಲಾಗಿದೆ.

 

error: Content is protected !!

Join the Group

Join WhatsApp Group