ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ, ಇಲ್ಲ ಸ್ಟಾರ್ ಪ್ರಚಾರಕರಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ.


ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆಸಲಿದ್ದು ಅದರಲ್ಲಿ ಕಿಚ್ಚ ಸುದೀಪ್ ಭಾಗಿಯಾಗುತ್ತಿದ್ದಾರೆ. ಅದರಲ್ಲಿ ತಮ್ಮ ನಡೆಯನ್ನು ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Scroll to Top