‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.05. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಕಾರಣಿಗಳು ಪಕ್ಷಾಂತರ ಮಾಡುವುದು ಸಾಮಾನ್ಯ. ಆದರೆ, ರಾಜಕಾರಣದಲ್ಲಿದ್ದ ಪ್ರಸ್ತಿದ್ದ ವ್ಯಕ್ತಿಗಳನ್ನು, ಖ್ಯಾತ ಚಲನಚಿತ್ರ ತಾರೆಯರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು, ಈ ಮೂಲಕ ಮತದಾರರ ಮನಗೆಲ್ಲಲು ಪಕ್ಷಗಳ ನಾಯಕರು ಪ್ರಯತ್ನಿಸುತ್ತಾರೆ.

ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ ಚಕ್ರವರ್ತಿ ಸುದೀಪ್ ಇಂದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ ಎಂದು ವರದಿ ತಿಳಿಸಿದೆ.

 

error: Content is protected !!

Join the Group

Join WhatsApp Group