ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.06. ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಲಿ ಗ್ರಾಮದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ ದಾಟುತಿದ್ದ ಅವರಿಗೆ ಕುಂದಾಪುರದಿಂದ ಉಡುಪಿಯತ್ತ ವೇಗವಾಗಿ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ತಲೆ, ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡ ಹೊನ್ನೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

Also Read  ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು

error: Content is protected !!
Scroll to Top