ವಿಟ್ಲ: ಚುನಾವಣೆ ಹಿನ್ನೆಲೆ ಹೆಚ್ಚಿದ ತಪಾಸಣೆ ➤ ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.07. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿಭಾಗದಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಟ್ಲ ಠಾಣಾ ವ್ಯಾಪ್ತಿಯ ಸಾರಡ್ಕ, ಕನ್ಯಾನ, ಆನೆಕಲ್ಲು, ಮೊದಲಾದ ಕಡೆಗಳಿಗೆ ಜಂಟಿಯಾಗಿ ಸಿಬ್ಬಂದಿಗಳ ಜತೆ ಭೇಟಿ, ಪರಿಶೀಲನೆ ನಡೆಸಿದ್ದು, ಕರ್ನಾಟಕ-ಕೇರಳ ಭಾಗದಲ್ಲಿ ಬಿಗೀ ಬಂದೋ ಬಸ್ತ್ ಏರ್ಪಡಿಸಿ, ತಪಾಸಣೆ ಕಾರ್ಯ ಬಿಗಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Also Read  ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು

 

error: Content is protected !!
Scroll to Top