ಉಡುಪಿ: ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ ➤ ಡಿಸಿ ಕೂರ್ಮಾರಾವ್ ಎಂ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.07. ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯಮಾರಾಟ ಮಾಡುವ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯಲ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Also Read  ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

 

error: Content is protected !!
Scroll to Top