ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ.

ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು.
ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಹಿಟ್ & ರನ್ - ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

 

 

error: Content is protected !!
Scroll to Top