70 ಅಡಿ ಎತ್ತರದ ರಥದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತ್ಯು.!!   ➤ ಪ್ರಕರಣ ದಾಖಲು *  

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.07   ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಅವಘಡ ಸಂಭವಿಸಿದೆ.

ಮೃತ ಮುದುಕಣ್ಣ ಕಾಚಾಪುರ ಸುಮಾರು 70 ಅಡಿ ಎತ್ತರದ ರಥದ ಮೇಲೇರಿ ಕಳಶ ಕಟ್ಟುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top