ವಿಧಾನಸಭಾ ಚುನಾವಣಾ ಕಣಕ್ಕಿಳಿದ ರಾಜಕೀಯ ಪಕ್ಷಗಳ ‘ಸೈಬರ್‌ ಸೈನ್ಯಗಳು’

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.08. ಇಂದಿನ ಚುನಾವಣೆಗಳು ಕೇವಲ ಭಾಷಣ, ಸಮಾವೇಶ, ಮೈದಾನ ರಾಜಕಾರಣಕ್ಕಷ್ಟೇ ಸೀಮಿತವಾಗಿಲ್ಲ. ಕ್ರಿಯಾಶೀಲ ಮನಸ್ಸಿನ ಅದ್ಭುತ ಯೋಚನೆಗಳೂ ಪ್ರಮುಖ ಅಸ್ತ್ರಗಳಾಗಿ ಬಳಕೆಯಾಗುತ್ತವೆ. ಇಂತಹ ಪ್ರಬಲ ಅಸ್ತ್ರಗಳನ್ನು ಯಾವ ಸಮಯದಲ್ಲಿ ಬಳಸುತ್ತಾರೆ, ಅದರ ಪರಿಣಾಮಗಳು ಏನಾಗಬಹುದು ಎಂಬ ನಿಖರ ಲೆಕ್ಕಾಚಾರ ಇದ್ದರಷ್ಟೇ ಚುನಾವಣೆಗಳ ದಿಕ್ಕು– ದೆಸೆಗಳನ್ನು ಬದಲಿಸಲು ಸಾಧ್ಯ.

ಇದೊಂದು ರೀತಿಯಲ್ಲಿ ‘ಮೈಂಡ್‌ ಗೇಮ್‌’. ಮಾಹಿತಿ ತಂತ್ರಜ್ಞಾನ ಇದಕ್ಕೆ ಪ್ರಮುಖ ವೇದಿಕೆ. ಸಾಮಾಜಿಕ ಜಾಲ ತಾಣಗಳು ಇದರ ‘ಅಸ್ತ್ರ’ಗಳು. ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಣಕ್ಕೆ ಈಗಾಗಲೇ ರಾಜಕೀಯ ಪಕ್ಷಗಳ ‘ಸೈಬರ್‌ ಸೈನ್ಯಗಳು’ ಇಳಿದಿದ್ದು, ತಂತ್ರಗಳು ಮತ್ತು ಪ್ರತಿತಂತ್ರಗಳನ್ನು ರೂಪಿಸುತ್ತಿದ್ದಾರೆ.

 

error: Content is protected !!
Scroll to Top