ಬೆಳ್ಳಾರೆ: ಏ. 27ಕ್ಕೆ ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ ➤ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಏ.08. ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ರಾಷ್ಟ್ರೀಯ ಪಕ್ಷವೊಂದರಿಂದ ಮನೆ ನಿರ್ಮಾಣ- ಏ.27ರಂದು ಗೃಹಪ್ರವೇಶ ಎಂದು ತಿಳಿದುಬಂದಿದೆ.

ಸುಳ್ಯ ತಾಲೂಕಿನ ಬೆಳ್ಳಾರೆಯ ಅಕ್ಷಯ ಚಿಕನ್ ಸೆಂಟರ್ ಬಳಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದಿ.ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗಾಗಿ ಆ ಪಕ್ಷದ ವತಿಯಿಂದ ನಿರ್ಮಿಸುತ್ತಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಏ.27ರಂದು ನಡೆಯಲಿದೆ.

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರು ಎಂಬಲ್ಲಿ ಪ್ರವೀಣ್‌ ಅವರ ಕನಸಾಗಿದ್ದ ಮತ್ತು ಅವರ ಆಸೆಯಂತೆ ಪ್ರವೀಣ್ ಅವರ ನಿಧನದ ನಂತರ ಈ ಮನೆಯನ್ನು ನಿರ್ಮಿಸಲಾಗುತ್ತಿದೆ.

Also Read  ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸಲು ಕ್ರೀಡೆ ಅಗತ್ಯ

 

 

 

error: Content is protected !!
Scroll to Top