ಒಂಟಿ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು   ➤ 3 ದಿನದ ಬಳಿಕ ಶವ ಪತ್ತೆ!!  

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.10. ಬೆಂಗಳೂರಿನಲ್ಲಿ ಮತ್ತೊಂದು ಒಂಟಿ ಮಹಿಳೆಯ ಕೊಲೆ ನಡೆದಿರುವ ಘಟನೆ ನಡೆದಿದ್ದು,3 ದಿನಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಬೆಂಗಳೂರಿನ ಕೆ.ಆರ್.ಪುರಂನ ಟಿಸಿ ಪಾಳ್ಯದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಳ್ಳಾರಿ ಮೂಲದ ಅಂಬಿಕಾ (40) ಕೊಲೆಯಾಗಿರುವ ಮಹಿಳೆ.

ಅಂಬಿಕಾ ದೇಹದ ಮೇಲೆ ಗಾಯಾದ ಗುರುತುಗಳು ಪತ್ತೆಯಾಗಿದ್ದು, ಕೆಲ ತಿಂಗಳ ಹಿಂದೆ ಅಂಬಿ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಏ.24(ಇಂದು)  ನಾಮಪತ್ರ  ಹಿಂಪಡೆಯಲು ಕೊನೆ ದಿನ.!

 

 

error: Content is protected !!
Scroll to Top