ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ.

ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಅವರ ಗೆಳತಿ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಒಂದೇ ದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃತಪಟ್ಟರೆ ಲಾವಣ್ಯ ಬಳಿಕ ಸಾವನ್ನಪ್ಪಿದ್ದರು. ರಕ್ಷಿತಾ ಹಾಗೂ ಲಾವಣ್ಯ ಅವರಿಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ವಿಷಪ್ರಾಶನ ಮಾಡಿದರೇ ಎಂಬ ಅನುಮಾನ ವ್ಯಕ್ತವಾಗಿದೆ.

Also Read  ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..!

 

 

error: Content is protected !!
Scroll to Top