ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ ಸೇನೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಜಮ್ಮು ಮತ್ತು ಕಾಶ್ಮೀರ, ಏ.10. ಭಾರತೀಯ ಸೇನೆ ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.


ಏಪ್ರಿಲ್ 9 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದರು. ಘಟನೆಯಲ್ಲಿ ಪಾಕಿಸ್ತಾನಿ ಮೂಲದ ವ್ಯಕ್ತಿ ಸಾವನ್ನಪ್ಪಿದ್ದನು.


ಇನ್ನು ಮೂರು ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಶಹಪುರ್ ಸೆಕ್ಟರ್‌ನಲ್ಲಿ ಮುಂಜಾನೆ 2.15 ರ ಸುಮಾರಿಗೆ ವಿಫಲಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read  ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

 

error: Content is protected !!
Scroll to Top