ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ.


ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ ಮನೆ ಮಾಡಲು ನಾನು ವ್ಯವಸ್ಥೆ ಮಾಡುತ್ತೇನೆ. ನಾಳೆ ಬಂದರ್ ಮಸೀದಿಯಲ್ಲಿ ನನಗೆ ಸಿಗಬೇಕು’ ಎನ್ನುತ್ತಾ ಎರಡು ಮೊಬೈಲ್ ಸಂಖ್ಯೆಗಳನ್ನು ನೀಡಿ ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

error: Content is protected !!
Scroll to Top