ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!!

(ನ್ಯೂಸ್ ಕಡಬ) newskadaba.com. ರಾಮನಗರ ಏ.10 ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ನವೀನ್ ತಂದೆ ಅರಸೇಗೌಡರ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಅರಸೇಗೌಡ(65) ಎಂದು ಗುರುತಿಸಲಾಗಿದೆ. ಅವರ ಮತ್ತೊಬ್ಬ ಮಗ ಸುರೇಂದ್ರ  ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

 

 

 

 

Scroll to Top