ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.10. ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕನೀರುತೋಟ ನಿವಾಸಿ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ನು ಹೊಂದಿದ್ದರು. ಪ್ರವೀಣ್ 10 ವರ್ಷಗಳಿಂದ ಅಂಗಡಿಯನ್ನು ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ ಎನ್ನಲಾಗಿದೆ.

Also Read  ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು

 

 

error: Content is protected !!
Scroll to Top