ಸಚಿವ ಮುನಿರತ್ನ ವಿರುದ್ಧ ಮತ್ತೊಂದು FIR

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.10. ಮತದಾರರಿಗೆ ಬೆಂಬಲಿಗರು ಸೀರೆ ಹಂಚುತ್ತಿದ್ದ ಹಿನ್ನೆಲೆಯಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್’ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಆರ್.ಆರ್. ನಗರದ ಬಂಗಾರಪ್ಪ ನಗರದಲ್ಲಿ ಮತದಾರರಿಗೆ ಮುನಿರತ್ನ ಬೆಂಬಲಿಗರು ಸೀರೆ ಹಂಚುವಾಗ ಸಿಕ್ಕಿಬಿದ್ದಿದ್ದರು. ಕೋಮುದ್ವೇಷ ಭಾಷಣ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ವಿರುದ್ಧ ಆರ್.ಆರ್. ನಗರ ಪೊಲೀಸರು ಎಫ್’ಐಆರ್ ದಾಖಲಿಸಿಕೊಂಡಿದ್ದರು.

 

error: Content is protected !!
Scroll to Top