ಕಾಸರಗೋಡು: ಅಡೂರು ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com. ಕಾಸರಗೋಡು, .11.  ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್ (9) ಮೃತಪಟ್ಟವರು.

ಅಡೂರು ದೇವರಡ್ಕದಲ್ಲಿ ಹೊಳೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಮುಳುಗುತ್ತಿರುವುದನ್ನು ಗಮನಿಸಿದ ಇತರ ಮಕ್ಕಳು ಕೂಡಲೇ ಸ್ಥಳೀಯರಿಗೆ ತಿಳಿಸಿದ್ದು, ಧಾವಿಸಿ ಬಂದ ಪರಿಸರವಾಸಿಗಳು ಮಕ್ಕಳನ್ನು ಮೇಲಕ್ಕೆತ್ತಿ ಮುಳ್ಳೆರಿಯದ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.  ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಆದೂರು ಠಾಣಾ ಪೊಲೀಸ್ ಠಾಣೆಯಲ್ಲಿ  ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Also Read  ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ವ್ಯಾಪಕ ಹಾನಿ ಜನಜೀವನ ಅಸ್ತವ್ಯಸ್ತ

error: Content is protected !!
Scroll to Top