‘ನನಗೆ ಟಿಕೆಟ್ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ’ ➤ ಜಗದೀಶ ಶೆಟ್ಟರ್

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.14. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ದೆಹಲಿಗೆ ಬರುವಂತೆ ತಿಳಿಸಿದ್ದರಿಂದ ಹೋಗಿದ್ದೆ. ಈ ವೇಳೆ ಅವರೊಂದಿಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ನನಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನ್ನ ಎಲ್ಲಾ ವಿಚಾರಗಳನ್ನು ಸಮಧಾನದಿಂದ ಕೇಳಿದ್ದಾರೆ. ಈ ಕುರಿತು ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರ ನೀಡುತ್ತೇವೆ. ಒಂದೆರಡು ದಿನ ಸಮಯವಾಕಾಶ ನೀಡುವಂತೆ ತಿಳಿಸಿದ್ದರಿಂದ ವಾಪಸ್ಸು ಬಂದಿದ್ದೇನೆ ಎಂದರು. ಇನ್ನು ನನಗೆ ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟಿದ್ದೇನೆಯೇ ಹೊರತು, ಮಗನಿಗೆ ಅಥವಾ ಇನ್ನಾರಿಗೋ ಕೊಡುವಂತೆ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Also Read  ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ  ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್​ಶೀಟ್ ಸಲ್ಲಿಕೆ

 

error: Content is protected !!