ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಕಾಸರಗೋಡು, .17. ಬೀದಿ ದೀಪ ದುರಸ್ಥಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.

ಕುಂಬಳೆ ಶಿರಿಯದ ಮುಹಮ್ಮದ್ ಹನೀಫ್(40) ಮೃತಪಟ್ಟವರು. ವಿದ್ಯುತ್ ಕಂಬಕ್ಕೆ ಹತ್ತಿ ದುರಸ್ತಿಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಸರ ವಾಸಿಗಳು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಪ್ರಕರಣದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group