ರೈತರಿಗೆ ಗುಡ್ ನ್ಯೂಸ್!   ➤ ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.19 ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲಾಗಿದೆ. ರೈತರಿಗೆ ವಂಚನೆ ತಡೆಯಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು, ಪ್ರಾಮಾಣಿಕೃತ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.

ನಕಲಿ ಹಾವಳಿ ತಡೆಯಲು ಪ್ರಸಕ್ತ ಮುಂಗಾರು ಹಂಗಾಮಿನಿಂದಲೇ ಬಿತ್ತನೆ ಬೀಜಗಳ ಪ್ಯಾಕೆಟ್ ಮೇಲೆ ಕೋಡ್ ಕಡ್ಡಾಯಗೊಳಿಸಲಾಗಿದೆ. ಸಂಬಂಧಿಸಿದೆ ಅಧಿಕಾರಿಗಳು ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡುವ ಮೊದಲು ಬೀಜಗಳ ಪ್ಯಾಕೆಟ್ ಗಳ ಮೇಲೆ ಕೋಡ್ ನಮೂದಿಸುವುದನ್ನು ಖಚಿತಪಡಿಸಿಕೊಳ್ಳಬೇಕಿದೆ.

 

Also Read  ಅರ್ಜೆಂಟೀನಾ ನಾಪತ್ತೆಯಾಗಿದ್ದ ವ್ಯಕ್ತಿ ಶಾರ್ಕ್ ಹೊಟ್ಟೆಯೊಳಗೆ ಪತ್ತೆ..!

 

 

error: Content is protected !!
Scroll to Top