ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆ..!   ➤ಆ ಹಣ ಕೆಲ ಹೊತ್ತಲ್ಲಿ ನಾಪತ್ತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.19 ರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೋಟಿ ಕೋಟಿ ಹಣ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಆದರೆ ಆ ಹಣ ಕೆಲ ಹೊತ್ತಲ್ಲಿ ನಾಪತ್ತೆಯಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಬಂದ ನಂತರ ಆ ಹಣ ಮಾಯವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಾಧ್ಯಮಗಳ ಮೂಲಕ ಮಾಹಿತಿ ಪಡೆದ ದಕ್ಷಿಣ ವಿಭಾಗದ ಪೊಲೀಸರು ನಗದು ಪತ್ತೆಯಾದ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

 

Also Read  ನಾಳೆ (ಜು.14) ದ್ವಿತೀಯ ಪಿಯು ಫಲಿತಾಂಶ ➤ ಸಚಿವ ಸುರೇಶ್ ಕುಮಾರ್

 

 

 

 

error: Content is protected !!
Scroll to Top