ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ    ➤ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.`19. ಮಂಗಳೂರಿನಲ್ಲಿ ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ವ್ಯಕ್ತಿಯೋರ್ವನ ಕೊಲೆಯಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರು‌ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.  ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

 

error: Content is protected !!

Join the Group

Join WhatsApp Group