ಪಿಎಸ್‌ಐ ನೇಮಕಾತಿ ಹಗರಣ, ವಿಚಾರಣೆಗೆ ಹೈಕೋರ್ಟ್ ತಡೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20  ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕಿಂಗ್‌ಪಿನ್‌ ಆಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್ ವಿರುದ್ಧ ರಾಜ್ಯದ ವಿವಿಧ ಕಡೆ ದಾಖಲಾಗಿರುವ 11 ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಇದರಿಂದಾಗಿ ಪಾಟೀಲ್ ಸದ್ಯಕ್ಕೆ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಜೊತೆಗೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ಆದೇಶಿಸಿದೆ.

 

 

Scroll to Top