ಮಂಗಳೂರು: ಸೌದಿ ಅರೇಬಿಯಾದಲ್ಲಿ ಅಪಘಾತ..! ➤ ಕರಾವಳಿ ಮೂಲದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.21. ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಕರಾವಳಿ ಮೂಲದ ಯುವಕನೊಬ್ಬ ಮೃತಪಟ್ಟ ಬಗ್ಗೆ ವರದಿಯಾಗಿದೆ. ವಿಟ್ಲ ಸಮೀಪದ ಉಕ್ಕುಡ ನಿವಾಸಿ ಮಹಮ್ಮದ್ ಮೊಯ್ಲಿರ್ ಎಂಬವರ ಪುತ್ರ ಹಮೀಬ್ ಮೃತ ಯುವಕ.


ಹಮೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ

error: Content is protected !!
Scroll to Top