ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ➤ ಶಿಕ್ಷಣ ಇಲಾಖೆ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಜೆ ಅವಧಿಯಲ್ಲಿ ಉಳಿಕೆಯಾದ ಅಕ್ಕಿ, ಗೋಧಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ ಮತ್ತು ಹಾಲಿನ ಪುಡಿ ಸೇರಿದಂತೆ ಇತರೆ ಪದಾರ್ಥಗಳನ್ನು ಪರಿಶೀಲಿಸಿ ದಾಖಲಿಸಬೇಕು. ಅವಧಿ ಮುಗಿದ ಪದಾರ್ಥಗಳಿದ್ದರೆ ಅವುಗಳನ್ನು ಬಿಸಿಯೂಟಕ್ಕೆ ಬಳಕೆ ಮಾಡಬಾರದು ಎಂದು ತಿಳಿಸಲಾಗಿದೆ.

Also Read  ಮಂಡೆಕರ: ರಬ್ಬರ್ ನಿಗಮದಿಂದ ರಸ್ತೆಗೆ ಅಡ್ಡಿ - ನ್ಯಾಯಾಲಯ ತಡೆಯಾಜ್ಞೆ ► ತಡೆಯಾಜ್ಞೆಯ ನಡುವೆಯೂ ರಸ್ತೆಗೆ ಅಡ್ಡಿಪಡಿಸಿ ಬೇಲಿ ನಿರ್ಮಾಣದ ಆರೋಪ

 

 

 

 

error: Content is protected !!
Scroll to Top