ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಅಮೃತಪಾಲ್ ಸಿಂಗ್ ಬಂಧನ.!

(ನ್ಯೂಸ್ ಕಡಬ)Newskadaba.com ವದೆಹಲಿ,ಏ.23 ಸಿಖ್ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 18 ರಂದು ಸಿಂಗ್ ಮತ್ತು ಅವರ ಸಂಘಟನೆ ‘ವಾರಿಸ್ ಪಂಜಾಬ್ ದೇ’ ಸದಸ್ಯರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದರು.

ಅಮೃತ್ ಪಾಲ್ ಸಿಂಗ್ ಮತ್ತು ಅವರ ಸಹಚರರ ಮೇಲೆ ವರ್ಗಗಳ ನಡುವೆ ವೈಮನಸ್ಸು ಹರಡುವುದು, ಕೊಲೆ ಯತ್ನ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಸಾರ್ವಜನಿಕ ಸೇವಕರಿಂದ ಕಾನೂನುಬದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.

 

Scroll to Top