ಬೆಳ್ತಂಗಡಿ: ಮಾಜಿ ಸಚಿವ ಕೆ.ಗಂಗಾಧರವರ ಮನೆಗೆ ಐಟಿ ದಾಳಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.24. ಮಾಜಿ ಸಚಿವರೂ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಗಂಗಾಧರ ಗೌಡ ಮತ್ತು ಮಗ ರಂಜನ್ ಗೌಡ ಅವರ ಮನೆಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಒಟ್ಟು ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ದಾಳಿ ಸಂಭವಿಸಿದೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯ ಮೇಲೆ, ಲಾಯಿದಲ್ಲಿರುವ ಪ್ರಸನ್ನ ಎಜುಕೇಶನ್ ಇನ್ಸಿಟ್ಯೂಷನ್ ಮತ್ತು ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ಬಂದು ದಾಳಿ ಮಾಡಿದ್ದು ಇನ್ನೂ ಪರಿಶೀಲನೆ ಮುಂದುವರಿದಿದೆ.

error: Content is protected !!
Scroll to Top