ಹಾಸನ: ತಡೆಗೋಡೆಗೆ ಢಿಕ್ಕಿ ಹೊಡೆದು ಐರಾವತ ಬಸ್ ಪಲ್ಟಿ ► ಗಂಡಿಬಾಗಿಲಿನ ವಿದ್ಯಾರ್ಥಿನಿ ಸೇರಿ 8 ಜನ ಮೃತ್ಯು, 10 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಹಾಸನ, ಜ.13. ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಎಂಬಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಶಾಂತಿಗ್ರಾಮ ಕೃಷಿ ಕಾಲೇಜಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೆಳ್ತಂಗಡಿಯ ಗಂಡಿಬಾಗಿಲು ನಿವಾಸಿ ವೈದ್ಯಕೀಯ ವಿದ್ಯಾರ್ಥಿನಿ ಡಯಾನ(20) ಚಾಲಕ ಲಕ್ಷ್ಮಣ್(38), ನಿರ್ವಾಹಕ ಶಿವಪ್ಪ ಛಲವಾದಿ(36), ಬೆಂಗಳೂರು ನಿವಾಸಿ ಗಂಗಾಧರ್(58) ಸೇರಿದಂತೆ ಎಂಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Also Read  ವಿಟ್ಲ: ಮೂವರು ಪಾರಿವಾಳ ಕಳ್ಳರ ಬಂಧನ

ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಮತ್ತು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಗೆ ಎಸ್‍ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

error: Content is protected !!
Scroll to Top